ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಸುವರ್ಣಾವಕಾಶ!
ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮಕ್ಕೆ ರೈತರ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ತರಬೇತಿಯ ವಿವರಗಳು
- ಅವಧಿ: ಮೇ 02, 2025 ರಿಂದ ಫೆಬ್ರವರಿ 28, 2026 ರವರೆಗೆ
- ಸ್ಥಳ: ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರ, ಹಾಸನ ಜಿಲ್ಲೆ
ಅರ್ಜಿ ಸಲ್ಲಿಕೆ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 28, 2025, ಸಂಜೆ 5.30 ರವರೆಗೆ
- ಅರ್ಜಿಗಳನ್ನು ಪಡೆಯುವ ಸ್ಥಳ
ಸಂಬಂಧಪಟ್ಟ ಕಚೇರಿಯಿಂದ ನೇರವಾಗಿ ಪಡೆಯಬಹುದು. - ಇಲಾಖೆಯ ಅಂತರ್ಜಾಲ ತಾಣ https://horticulturedir.karnataka.gov.in
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ
ಹಿರಿಯ ಸಹಾಯಕ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ, ಕೊಡಗು. ಅರ್ಜಿಗಳನ್ನು ಖುದ್ದಾಗಿ ಸಲ್ಲಿಸತಕ್ಕದ್ದು.
ಅಗತ್ಯ ದಾಖಲಾತಿಗಳು
ಇದನ್ನು ಓದಿ:ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ – 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಅರ್ಜಿಯೊಂದಿಗೆ ಈ ಕೆಳಗಿನ ಮೂಲ ದಾಖಲಾತಿಗಳನ್ನು ಲಗತ್ತಿಸಬೇಕು
- ಎಸ್ಎಸ್ಎಲ್ಸಿ ಅಂಕಪಟ್ಟಿ
- ಆಧಾರ್ ಕಾರ್ಡ್
- ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಪಹಣಿ (ಆರ್ಟಿಸಿ)
- ಜಾತಿ ಪ್ರಮಾಣ ಪತ್ರ
ಭಾವಚಿತ್ರ (ಫೋಟೋ) - ತಂದೆ/ತಾಯಿಯವರಿಂದ ಒಪ್ಪಿಗೆ ಪತ್ರ
ಹೆಚ್ಚಿನ ಮಾಹಿತಿಗಾಗಿ
ಹೆಚ್ಚಿನ ವಿವರಗಳಿಗಾಗಿ ಅಥವಾ ಯಾವುದೇ ಸ್ಪಷ್ಟೀಕರಣಕ್ಕಾಗಿ, ಕಚೇರಿಯನ್ನು ಬೆಳಗ್ಗೆ 10:00 ರಿಂದ ಸಂಜೆ 5:30 ರವರೆಗೆ ಸಂಪರ್ಕಿಸಬಹುದು.
ಈ ಅವಕಾಶವನ್ನು ರೈತರ ಮಕ್ಕಳು ಸದುಪಯೋಗಪಡಿಸಿಕೊಳ್ಳಬಹುದು.
1 thought on “ರೈತರ ಮಕ್ಕಳಿಗೆ ಗುಡ್ ನ್ಯೂಸ್ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ”