ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ, ಕೇಂದ್ರ ಸರ್ಕಾರದ ಘೋಷಣೆ

: ಭಾರತ್ ಬ್ರಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಡಿ ಸಮಗ್ರ ಭಾರತದಲ್ಲಿ ಒಂದೇ ಬ್ರಾಂಡಿನಡಿಯಲ್ಲಿ ದಿನನಿತ್ಯ ಬೇಕಾಗುವ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ.

ಈ ವರೆಗೆ ಭಾರತ್‌ ಬ್ಯಾಂಡ್ ಅಡಿಯಲ್ಲಿ ಕಡ್ಲೆ ಬೇಳೆ ರೂ. 60 ಪ್ರತಿ ಕೆಜಿ, ಗೋದಿ ಹಿಟ್ಟು ರೂ. 27.50 ಪ್ರತಿ ಕೆ.ಜಿಹಾಗೂ ಮೂಂಗ್ ದಾಲ್ ಅನ್ನು ಪ್ರತಿ ಕೆಜಿ ಗೆ ರೂ. 93 ರಂತೆ ವಿತರಣೆ ಮಾಡಲಾಗುತ್ತಿದೆ ಎಂದರು. ಈ ಯೋಜನೆಯ ಮುಂದುವರೆದ ಭಾಗವಾಗಿ ಭಾರತ ಬ್ರಾಂಡ್ ಯೋಜನೆಯಡಿ ಅಕ್ಕಿಯನ್ನು ಪ್ರತಿ ಕೆ.ಜಿಗೆ ರೂ. 29ರಂತೆ ಸರಬರಾಜು ಮಾಡಲು ಹಸಿರು ನಿಶಾನೆ ತೋರಿಸಲಾಗುತ್ತಿದೆ.

ಜನಸಾಮಾನ್ಯರ ಹಿತದೃಷ್ಟಿಯಿಂದ ಈ ಯೋಜನೆಯನ್ನು ರೂಪಿಸಿದ ಸನ್ಮಾನ್ಯ ಪ್ರಧಾನಿ ಗಳಾದ ನರೇಂದ್ರ ಮೋದಿಜಿ ಅವರನ್ನು ಹಾಗೂ ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು. ಇಂತಹ ಒಂದು ಒಳ್ಳೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನನಗೆ ಹೆಮ್ಮೆಯುಂಟಾಗುತ್ತಿದೆ.

Admin
Author

Admin

Leave a Reply

Your email address will not be published. Required fields are marked *